ಮಂಡ್ಯ : ಜಿಲ್ಲಾ ಕಾಂಗ್ರೆಸ್ ಪಕ್ಷದ ಮಾಧ್ಯಮ ಸಂಯೋಜಕರಾಗಿ ಎನ್.ಕೃಷ್ಣೇಗೌಡ ಅವರನ್ನು ನೇಮಕ ಮಾಡಲಾಗಿದೆ. ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅನುಮೋದನೆ ಮೇರೆಗೆ ಜಿಲ್ಲಾ ಕಾಂಗ್ರೆಸ್ ಮಾಧ್ಯಮ ಸಂಯೋಜಕರನ್ನಾಗಿ ಎನ್.ಕೃಷ್ಣೇಗೌಡ ಅವರನ್ನು ನೇಮಕ ಮಾಡಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎನ್.ಕೃಷ್ಣೇಗೌಡ ವಿವಿಧ ಪತ್ರಿಕೆಗಳಲ್ಲಿ ಕಳೆದ 28 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.
0 ಕಾಮೆಂಟ್ಗಳು