ಅಡ್ಡಂಡ ಕಾರ್ಯಪ್ಪ ರಚಿತ ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನ ವಿರುದ್ಧ ಪಿಐಎಲ್ ಸಲ್ಲಿಸಲು ನಿರ್ಧಾರ : ತನ್ವೀರ್ ಸೇಠ್

ಮೈಸೂರು : ಭಾನುವಾರ ನಗರದಲ್ಲಿ ಬಿಡುಗಡೆಯಾದ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಬರೆದಿರುವ 'ಟಿಪ್ಪು ನಿಜ ಕನಸುಗಳು' 
ನಾಟಕ ಪ್ರದರ್ಶನದ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗುವುದು ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಪುಸ್ತಕ ನನ್ನ ಕೈ ಸೇರಿದೆ. ಇದೇ ನವೆಂಬರ್ 20 ರಿಂದ ಕೃತಿ ನಾಟಕ ಪ್ರದರ್ಶನವಾಗುವುದರ ವಿರುದ್ಧ ಪಿಐಎಲ್ ಹಾಕಲಾಗುವುದು 
ನಾಟಕ ಪ್ರದರ್ಶನವಾಗದಂತೆ ಇಂದು ನಮ್ಮ ವಕೀಲರ ಮೂಲಕ ಪಿಐಎಲ್ ಸಲ್ಲಿಸುತ್ತೇನೆ. ಎಲ್ಲವನ್ನು ವಕೀಲರು ನೋಡಿಕೊಳ್ಳುತ್ತಾರೆ ಎಂದರು. 

ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯೆ : ಗುಂಬಜ್ ಮಾದರಿಯ ಬಸ್ ನಿಲ್ದಾಣಗಳನ್ನು ತೆರವು ಕುರಿತು ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ತನ್ವೀರ್ ಸೇಠ್, ಯಾರ ಯಾರ ದೃಷ್ಟಿಯಲ್ಲಿ ಏನೇನು ಕಾಣುತ್ತದೆಯೋ ಅದೇ ಕಾಣೋದು. ಬಸ್ ನಿಲ್ದಾಣ ಆಗಿರುವುದು ಸರ್ಕಾರದ ಹಣದಲ್ಲಿ. ಗುಂಬಜ್ ಮಾದರಿಯ ಬಸ್ ನಿಲ್ದಾಣವನ್ನು ಒಡೆದು ಹಾಕುವುದಾದರೆ ಅದೆಷ್ಟು ಒಡೆದು ಹಾಕುತ್ತಾರೋ, ಹಾಕಲಿ. ನಾವು ನೋಡಿಕೊಳ್ಳುತ್ತೇವೆ ಎಂದು ತನ್ವೀರ್ ಸೇಠ್ ಸಂಸದರಿಗೆ ಸವಾಲು ಹಾಕಿದರು.
ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುವ ವಿಚಾರ ಸರಿಯಲ್ಲ. ಯಾರ ಮನಸ್ಸಿನಲ್ಲಿ ಏನೇನು ಇದೆಯೋ ಅದನ್ನೇ ಮಾಡುತ್ತಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಇವೆಲ್ಲ ಸಾಮಾನ್ಯ ಎಂದು ಅವರು  ಹೇಳಿದರು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು