ಕುಂತೂರು ಮೋಳೆ ನಿಂಗರಾಜು ಸಾವು ಪ್ರಕರಣ : ಪೊಲೀಸರ ಅಮಾನತ್ತು ಖಂಡಿಸಿ ಪ್ರತಿಭಟನೆ
ನವೆಂಬರ್ 30, 2022
ಯಳಂದೂರು : ತಾಲೂಕಿನ ಯರಿಯೂರು ಗ್ರಾಮದ ಬಳಿ ಪೊಲೀಸ್ ಜೀಪ್ನಿಂದ ಜಿಗಿದು ಮೃತಪಟ್ಟ ಕುಂತೂರು ಮೋಳೆ ಗ್ರಾಮದ ನಿಂಗರಾಜು ಸಾವಿನ ಪ್ರಕರಣದ ಹಿನ್ನೆಲೆಯಲ್ಲಿ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತ್ತುಗೊಳಿಸಿದ ಕ್ರಮವನ್ನು ಖಂಡಿಸಿ ದಲಿತಪರÀ ಸಂಘಟನೆಗಳ ಸದಸ್ಯರು ಬುಧವಾರ ಪಟ್ಟಣದ ಪೊಲೀಸ್ ಠಾಣೆಯ ಮುಂಭಾಗ ಪ್ರತಿಭಟನೆ ನಡೆಸಿದರು. ಕುಂತೂರು ಮೋಳೆ ಗ್ರಾಮದ ನಿಂಗರಾಜು ಮಂಗಳವಾರ ಜೀಪ್ನಿಂದ ಜಿಗಿದು ಮೃತಪಟ್ಟ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಉಪ್ಪಾರ ಸಮುದಾಯದವರು ಈ ಸಾವು ಹಲವು ಅನುಮಾನಗಳನ್ನು ಹುಟ್ಟಿಸಿದ್ದು ಕೂಡಲೇ ಸಂಬಂಧಪಟ್ಟವರ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಮಂಗಳವಾರ ಪ್ರತಿಭಟಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಪಿಐ ಶಿವಮಾದಯ್ಯ ಮಾಂಬಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಮಾದೇಗೌಡ ಹಾಗೂ ಪೇದೆ ಸೋಮಣ್ಣರನ್ನು ಸೇವೆಯಿಂದ ಅಮಾನತ್ತು ಮಾಡಲಾಗಿತ್ತು. ಆದರೆ, ಮೃತಪಟ್ಟ ವ್ಯಕ್ತಿ ಹೇಗೆ ಸಾವನ್ನಪ್ಪಿದ ಎಂಬುದನ್ನು ತನಿಖೆ ನಡೆಸದೆ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ. ಸಿಪಿಐ ಶಿವಮಾದಯ್ಯರನ್ನು ಉದ್ದೇಶ ಪೂರ್ವಕವಾಗಿ ಇದರಲ್ಲಿ ಶಾಮೀಲು ಮಾಡಲಾಗಿದೆ. ರಾಜಕೀಯ ಪಿತೂರಿ ಹಾಗೂ ವೈಯುಕ್ತಿಕ ದ್ವೇಷದಿಂದ ಹೀಗೆ ಮಾಡಲಾಗಿದೆ. ಜಿಪಂ ಮಾಜಿ ಉಪಾಧ್ಯಕ್ಷ ಜೆ. ಯೋಗೇಶ್ ವೈಯುಕ್ತಿಕ ಪ್ರತಿಷ್ಠೆಗಾಗಿ ಶಿವಮಾದಯ್ಯರನ್ನು ನೇರ ಹೊಣೆಯಾಗಿ ಮಾಡಿ ಇವರನ್ನು ಬಲಿಪಶು ಮಾಡಿದ್ದಾರೆ. ಕೂಡಲೇ ಉನ್ನತ ಅಧಿಕಾರಿಗಳು ಇವರ ಅಮಾನತ್ತಿನ ಆದೇಶವನ್ನು ಹಿಂಪಡೆಯಬೇಕು. ಶಿವಮಾದಯ್ಯರನ್ನು ಕರ್ತವ್ಯದಲ್ಲಿ ಮುಂದುವರೆಸಬೇಕು ಸತ್ಯಾಸತ್ಯತೆಯನ್ನು ಪರಿಶೀಲಿಸಿ ಕ್ರಮ ವಹಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ನಂತರ ಡಿವೈಎಸ್ಪಿ ನಾಗರಾಜುರವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಇದನ್ನು ಸ್ವೀಕರಿಸಿ ಮಾತನಾಡಿದ ನಾಗರಾಜು, ಮಂಗಳವಾರ ನಡೆದ ಘಟನೆಗೆ ಸಂಬಂಧಿಸಿದಂತೆ ಇವರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು ಸಿಪಿಐ ಶಿವಮಾದಂ6iÀ್ಯುರವರೂ ಸೇರಿದಂತೆ ಇತರರಿಗೆ ನ್ಯಾಯ ಸಿಗುವ ಭರವಸೆ ಇದೆ. ಪ್ರಗತಿಪರ ಸಂಘಟನೆಗಳ ಸದಸ್ಯರು ತಾಳ್ಮೆಯಿಂದ ವರ್ತಿಸಬೇಕು. ಈ ಮನವಿಯನ್ನು ಇಲಾಖೆಯ ಉನ್ನತ ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ವಹಿಸುವ ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ಡಿ. ರೇವಣ್ಣ, ಮದ್ದೂರು ಚಕ್ರವರ್ತಿ, ಶಿವಮೂರ್ತಿ, ದೊಡ್ಡಿಂದುವಾಡಿ ಸಿದ್ದರಾಜು, ಮಾಂಬಳ್ಳಿ ರಾಮು, ಜೆ.ಶ್ರೀನಿವಾಸ್, ದುಗ್ಗಹಟ್ಟಿ ಮಹೇಶ್, ಅಗ್ರಹಾರ ರಂಗಸ್ವಾಮಿ, ಕೆಸ್ತೂರು ನಾಗರಾಜು, ರಾಮಾಪುರ ರಂಗಸ್ವಾಮಿ, ಚಂದ್ರಶೇಖರ, ಡಿ.ರಂಗಸ್ವಾಮಿ, ಮಾಂಬಳ್ಳಿ ಕಾಂತರಾಜು, ಮಹೇಶ, ರಾಮಸಮುದ್ರ ಸುರೇಶ್, ಚಂದ್ರಶೇಖರ್, ರಾಚಪ್ಪ, ರವಿ ಸೇರಿದಂತೆ ಅನೇಕರು ಇದ್ದರು.
0 ಕಾಮೆಂಟ್ಗಳು