ನಾಗರಹೊಳೆ : ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಭಾಗವಹಿಸಿದ್ದ ಗೋಪಾಲಸ್ವಾಮಿ ಎಂಬ ಸಾಕು ಆನೆ ಕಾಡಾನೆಯೊಂದಿಗೆ ನಡೆದ ಕಾದಾಟದಲ್ಲಿ ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹನಗೋಡು ಹೋಬಳಿ ಕೊಳುವಿಗೆ ಬಳಿಯ ಅರಣ್ಯ ಪ್ರದೇಶದಲ್ಲಿ ಗೋಪಾಲಸ್ವಾಮಿ ಸಾಕಾನೆಯು ಮೃತಪಟ್ಟಿದ್ದು, ನಿನ್ನೆ ನೇರಳಕುಪ್ಪೆ ಬಿ ಹಾಡಿಯ ಕ್ಯಾಂಪಿನಿಂದ ಗೋಪಾಲಸ್ವಾಮಿಯನ್ನು ಮೇಯಲು ಅರಣ್ಯಕ್ಕೆ ಬಿಡಲಾಗಿತ್ತು. ಈ ವೇಳೆ ಮಸ್ತಿಗೆ ಬಂದಿದ್ದ ಗೋಪಾಲಸ್ವಾಮಿ ಕೊಳುವಿಗೆ ಅರಣ್ಯ ಪ್ರದೇಶಕ್ಕೆ ನುಗ್ಗಿತ್ತು. ಈ ವೇಳೆ ಅಯ್ಯಪ್ಪ ಎಂಬ ಪುಂಡಾನೆ ಜತೆ ಕಾಳಗ ನಡೆಸಿ ಮೃತಪಟ್ಟಿದೆ.
ಈ ಹಿಂದೆ ಅರಣ್ಯ ಇಲಾಖೆಯವರು ಪುಂಡಾಟ ನಡೆಸುತ್ತಿದ್ದ ಅಯ್ಯಪ್ಪ ಎಂಬ ಕಾಡಾನೆಗೆ ಕಾಲರ್ ಅಳವಡಿಸಿದ್ದರು. ಸ್ಥಳಕ್ಕೆ ಡಿ.ಸಿ.ಎಫ್ ಹರ್ಷಕುಮಾರ್ ಚಿಕ್ಕನರಗುಂದ, ಎ.ಸಿ.ಎಫ್ ದಯಾನಂದ್ ಸೇರಿದಂತೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದರು. ಇಂದು ಸಂಜೆ ಕೊಳುವಿಗೆ ಬಳಿ ಗೋಪಾಲಸ್ವಾಮಿ ಅಂತ್ಯಸಂಸ್ಕಾರ ನಡೆಸಲಾಯಿತು. ಪುಂಡಾನೆಯ ದಾಳಿಗೆ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದ ಗೋಪಾಲಸ್ವಾಮಿಗೆ ಮಂಗಳವಾರ ನಾಲ್ಕು ವೈದ್ಯರ ತಂಡದಿಂದ ರೀತಿಯ ಚಿಕಿತ್ಸೆ ನೀಡಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೆ ಗೋಪಾಲಸ್ವಾಮಿ ಇಂದು ಮೃತಪಟ್ಟಿದೆ. ಅಭಿಮನ್ಯು ನಂತರ ಗೋಪಾಲಸ್ವಾಮಿ ಅಂಬಾರಿ ಹೊರುವ ಆನೆ ಎಂದೇ ಬಿಂಬಿತವಾಗಿತ್ತು.
0 ಕಾಮೆಂಟ್ಗಳು