ಪಾಲಿಬೆಟ್ಟ ಮೀನು ವ್ಯಾಪಾರಿಯ ಹತ್ಯೆ ಪ್ರಕರಣ: ಮೈಸೂರಿನಲ್ಲಿ ಆರೋಪಿ ಬಂಧನ

ಮಡಿಕೇರಿ: ಸಿದ್ದಾಪುರ ಪಾಲಿಬೆಟ್ಟದ ಮೀನು ವ್ಯಾಪಾರಿಯ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿದ ಆರೋಪದಲ್ಲಿ ಆರೋಪಿ ನೌಶಾದ್ ಎಂಬಾತನನ್ನು ಸಿದ್ದಾಪುರ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ.  
ಡಿಸೆಂಬರ್ 10 ರಂದು ಮೀನು ವ್ಯಾಪಾರಿಯ ಮೇಲೆ ಕಾರು ಹತ್ತಿಸಿ ಗಂಭೀರ ಗಾಯಗೊಳಿಸಿದ್ದ ನಂತರ ಆರೋಪಿ ಕಾರಿನೊಂದಿಗೆ ಮೂರ್ನಾಡು ಗ್ರಾಮದ ಮುಖ್ಯ ರಸ್ತೆಯಲ್ಲಿ ಕಾರು ನಿಲ್ಲಿಸಿ ಪರಾರಿಯಾಗಿದ್ದ. ಈ ಬಗ್ಗೆ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 
ಆರೋಪಿಯ ಪತ್ತೆಗಾಗಿ ಪೊಲೀಸ್ ವರಿμÁ್ಠಧಿಕಾರಿ ಕ್ಯಾಪ್ಟನ್ ಅಯ್ಯಪ್ಪ ಪೊಲೀಸ್ ತಂಡವನ್ನು ರಚಿಸಿದ್ದರು. ಡಿವೈಎಸ್ಪಿ ಗಜೇಂದ್ರ ಪ್ರಸಾದ್ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಶಿವಶಂಕರ್ ನೇತೃತ್ವದೊಂದಿಗೆ ಸಿದ್ದಾಪುರ ಠಾಣಾಧಿಕಾರಿ  ಮೋಹನ್ ರಾಜ್ ಹಾಗೂ ಸಿಬ್ಬಂದಿಗಳು ತಲೆಮರಸಿಕೊಂಡಿದ್ದ ಆರೋಪಿಯನ್ನ ಮೈಸೂರಿನಲ್ಲಿ ಪತ್ತೆ ಹಚ್ಚಿ ಬಂಧಿಸಿ ನ್ಯಾಯಲಯಕ್ಕೆ  ಹಾಜರುಪಡಿಸಿದ್ದಾರೆ.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು