ಮಂಗಳೂರು: ಸುರತ್ಕಲ್ನಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಮುಂದುವರಿದಿದ್ದು, ಇಂದು ಸಂಜೆ ಯುವಕನೊಬ್ಬನಿಗೆ ಚಾಕು ಇರಿದ ಘಟನೆ ಸುರತ್ಕಲ್ ಕಾಟಿಪಳ್ಳದ ನೈತಂಗಡಿ ಎಂಬಲ್ಲಿ ನಡೆದಿದೆ. ಕೃಷ್ಣಪುರ 4ನೇ ಬ್ಲಾಕ್ನ ನಿವಾಸಿ ಜಲೀಲ್ ಚೂರಿ ಇರಿತಕ್ಕೊಳಗಾದ ಯುವಕ. ದುಷ್ಕರ್ಮಿಗಳು ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಯುವಕನ ಸ್ಥಿತಿ ಗಂಭೀರವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
0 ಕಾಮೆಂಟ್ಗಳು