ವಿಸಿ ನೇಮಕಕ್ಕೆ ೬ಕೋಟಿ: ಪ್ರತಾಪ ಸಿಂಹ ಹೇಳಿಕೆ ವಿರುದ್ಧ ಲೋಕಾಯುಕ್ತಕ್ಕೆ ದೂರು

ಲೋಕಾ ಕ್ರಮಕ್ಕೆ ಮುಂದಾಗದಿದ್ದರೆ ಹೈಕೋರ್ಟ್‌ ಮೊರೆ: ಎಂ.ಲಕ್ಷ್ಮಣ್‌

ಮೈಸೂರು: ಕರ್ನಾಟಕದಲ್ಲಿ ಯಾವುದೇ ಒಂದು ವಿಶ್ವವಿದ್ಯಾನಿಲಯದ ಕುಲಪತಿಯಾಗಲು 5 ರಿಂದ  6 ಕೋಟಿ ರೂ. ಹಣ ಕೊಡಬೇಕಾಗುತ್ತದೆ. ದುಡ್ಡು ಕೊಟ್ಟವರು ವಾಪಸ್‌ ಪಡೆಯಲು ಬೇರೆ ವ್ಯವಹಾರ ಮಾಡಲೇಬೇಕಾಗುತ್ತದೆ. ಆಯ್ಕೆ ಪ್ರಕ್ರಿಯೆಗೆ ರಚಿಸುವ ಶೋಧನಾ ಸಮಿತಿಯಲ್ಲಿ ಹೆಸರು ಬರಲೂ ಕೂಡ ಲಾಬಿ ನಡೆಯುತ್ತಿದೆಎಂಬ ಮೈಸೂರುಕೊಡಗು ಬಿಜೆಪಿ ಸಂಸದ ಪ್ರತಾಪ ಸಿಂಹ ನೀಡಿರುವ ಹೇಳಿಕೆ ಕುರಿತು ತನಿಖೆ ನಡೆಸುವಂತೆ ಆಗ್ರಹಿಸಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಿದ್ದೇನೆಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ತಿಳಿಸಿದರು.
ಮಂಗಳವಾರ ಕಾಂಗ್ರೆಸ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ವಿಕಿ ಬುಕ್ಸ್‌ಸ್ಮಾರ್ಟ್‌ಕೀ ವತಿಯಿಂದ ಬೆಂಗಳೂರಿನಲ್ಲಿ ಜುಲೈ ತಿಂಗಳಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಕುಲಪತಿಗಳ ನೇಮಕಾತಿಯಲ್ಲಿನ ಭ್ರಷ್ಟಾಚಾರದ ಕುರಿತು ಪ್ರತಾಪ ಸಿಂಹ ಮಾತನಾಡಿದ್ದಾರೆ. ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದನ್ನು ಆಧರಿಸಿ ದೂರು ನೀಡಲಿದ್ದೇನೆಎಂದು ಹೇಳಿದರು.
ಕೆಸೆಟ್ ಪಾಸಾಗಿರುವವರಿಗೆ ಇಂಗ್ಲಿಷ್‌ನಲ್ಲಿ ಒಂದು ವಾಕ್ಯ ಬರೆಯಲು ಗೊತ್ತಿಲ್ಲ, ಇನ್ನು, ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾದರೆ, ಯಾವ ರೀತಿ ಪಾಠ ಮಾಡಬಹುದು? ಕೆಸೆಟ್ ಪರೀಕ್ಷೆಯಲ್ಲಿ ಗೋಲ್‌ಮಾಲ್ ನಡೆಯುತ್ತಿದೆ. ಹೀಗಾಗಿ, ಮೈಸೂರು ವಿಶ್ವವಿದ್ಯಾಲಯದ ವಿರುದ್ಧವೇ ಯುಜಿಸಿ ಅಧ್ಯಕ್ಷರಿಗೆ ದೂರು ಕೊಟ್ಟು ವಿಚಾರಣೆಗೆ ಹಾಕಿಸಿದ್ದೇನೆ. ನಾವು ಕಮಿಷನ್‌ ಪಡೆಯದೇ ರಾಜಕಾರಣ ಮಾಡುತ್ತಿದ್ದೀವಾ? ಭ್ರಷ್ಟಾಚಾರ ಮುಕ್ತ ರಾಜಕಾರಣದ ಬಗ್ಗೆಯೂ ಫೋಕಸ್ ಮಾಡಬೇಕಿದೆಎಂದೆಲ್ಲಾ ಹೇಳಿದ್ದಾರೆ. ಇದೆಲ್ಲವನ್ನೂ ಗಂಭೀರವಾಗಿ ಪರಿಗಣಿಸುವಂತೆ ಲೋಕಾಯುಕ್ತವನ್ನು ಕೋರಲಾಗುವುದುಎಂದರು.
ಲೋಕಾಯುಕ್ತ ಪೊಲೀಸರು 15 ದಿನಗಳಲ್ಲಿ ಕ್ರಮ ವಹಿಸದಿದ್ದಲ್ಲಿ, ಹೈಕೋರ್ಟ್‌ ಮೊರೆ ಹೋಗುತ್ತೇನೆಎಂದು ತಿಳಿಸಿದರು.
ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದರು ಹೇಳುತ್ತಿರುವುದನ್ನು ಗಮನಿಸಿದರೆ, ರಾಜ್ಯಪಾಲರ ಕಚೇರಿಯೂ ಭ್ರಷ್ಟಾಚಾರದಿಂದ ತುಂಬಿ ತುಳುಕುತ್ತಿದೆ ಎಂದರ್ಥವೇ? ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಉತ್ತರ ಕೊಡಬೇಕುಎಂದು ಒತ್ತಾಯಿಸಿದರು.
ಐಟಿ, ಸಿಬಿಐ, ಇಡಿಯಂತಹ ತನಿಖಾ ಸಂಸ್ಥೆಗಳನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿದಂತೆ ಕಾಂಗ್ರೆಸ್‌ ನಾಯಕರ ಮೇಲೆ ಆಗಾಗ ದಾಳಿ ನಡೆಸುತ್ತಲೇ ಇದೆ. ನಾವು ಇದಕ್ಕೆಲ್ಲಾ ಜಗ್ಗುವುದಿಲ್ಲ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಕಾಂಗ್ರೆಸ್‌ನ 21 ಪ್ರಮುಖರನ್ನು ಬಿಜೆಪಿಯವರುಪಕ್ಷಕ್ಕೆ ಸೇರುವಂತೆ ಆಹ್ವಾನಿಸಿದ್ದಾರೆ. ಇಲ್ಲದಿದ್ದರೆ, ಐಟಿ ದಾಳಿ ಮಾಡಿಸುತ್ತೇವೆ ಎಂದು ಬೆದರಿಕೆ ಒಡ್ಡಿದ್ದಾರೆರಾಜ್ಯದ 21 ಕಾಂಗ್ರೆಸ್ ಮುಖಂಡರ ಮೇಲೆ ಇಡಿ ದಾಳಿ ಮಾಡಲು ಸಿದ್ದತೆ ನಡೆದಿದ್ದು, ಇದರಲ್ಲಿ 8 ರಿಂದ 9 ಶಾಸಕರೂ ಇದ್ದಾರೆ. ಬಿಜೆಪಿಗೆ ಬಂದರೆ ಇಡಿ ದಾಳಿ ಮಾಡಿಸುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದಾರೆ. ಸಂಬಂಧ ಈಗಾಗಲೇ ಬೇರೆ ಬೇರೆ ರಾಜ್ಯಗಳಿಂದ 300 ಕ್ಕೂ ಹೆಚ್ಚು ಜನ ಐಟಿ ಅಧಿಕಾರಿಗಳು ಕರ್ನಾಟಕಕ್ಕೆ ಬಂದಿದ್ದು, ಕಾಂಗ್ರೆಸ್ ಮುಖಂಡರ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದಾರೆ ಎಂದು ತಿಳಿಸಿದ್ದಾರೆ
.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು