ಕಾರು-ಬಸ್ ನಡುವೆ ಡಿಕ್ಕಿ : ಪ್ರಾಣಾಪಾಯದಿಂದ ಪಾರು

ಹನೂರು ಸಮೀಪ ಎಲ್ಲೇಮಾಳ ಗ್ರಾಮದ ಬಳಿ ಘಟನೆ
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮದ ಆಂಜನೇಯ ದೇವಸ್ಥಾನದ ಮುಂಭಾಗ ಕಾರು ಮತ್ತು ಬಸ್ಸಿನ ನಡುವೆ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಮೈಸೂರಿನಿಂದ ಮಹದೇಶ್ವರ ಬೆಟ್ಟಕ್ಕೆ ಇಂದು ಮಧ್ಯಾಹ್ನ  ತೆರಳುತ್ತಿದ್ದ ಭಕ್ತಾದಿಗಳ ಕಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಅಪಘಾತವಾದ ಕಾರಿನಲ್ಲಿ 8 ಜನರು ಪ್ರಯಾಣ ಮಾಡುತ್ತಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಕಾರು ಮತ್ತು ಬಸ್ಸು ಎರಡೂ ಜಖಂಗೊಂಡಿದೆ.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು