ಸಿಸಿಬಿ ಪೊಲೀಸರ ದಾಳಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರ ಬಂಧನ, ಮೂವರು ಯುವತಿಯರ ರಕ್ಷಣೆ

ಮೈಸೂರು : ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಸರಸ್ವತಿಪುರಂ ಠಾಣಾ ವ್ಯಾಪ್ತಿಯ ಲಾಡ್ಜ್‍ವೊಂದರ ಮೇಲೆ ದಾಳಿ ನಡೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರನ್ನು ಬಂಧಿಸಿದ್ದು, ಪಶ್ಚಿಮ ಬಂಗಾಳ, ಬೆಂಗಳೂರು ಮತ್ತು ಮೈಸೂರಿನ ಒಟ್ಟು ಮೂವರು ಯುವತಿಯರನ್ನು ರಕ್ಷಿಸಿದ್ದಾರೆ.
ಡಿಸಿಪಿ ಎಂ.ಎಸ್.ಗೀತಾ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಸಿ.ಕೆ.ಅಶ್ವಥ್ ನಾರಾಯಣ ಉಸ್ತುವಾರಿಯಲ್ಲಿ ಇನ್ಸ್‍ಪೆಕ್ಟರ್ ಎ.ಮಲ್ಲೇಶ್, ಪಿಎಸ್‍ಐ ಪ್ರತಿಭಾ ಜಂಗವಾಡ ಮತ್ತು ಸಿಬ್ಬಂದಿಗಳು ದಾಳಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಈ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಸಿಬಿ ಪೊಲೀಸರ ದಾಳಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರ ಬಂಧನ, ಮೂವರು ಯುವತಿಯರ ರಕ್ಷಣೆ
ಮೈಸೂರು : ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಸರಸ್ವತಿಪುರಂ ಠಾಣಾ ವ್ಯಾಪ್ತಿಯ ಲಾಡ್ಜ್‍ವೊಂದರ ಮೇಲೆ ದಾಳಿ ನಡೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರನ್ನು ಬಂಧಿಸಿದ್ದು, ಪಶ್ಚಿಮ ಬಂಗಾಳ, ಬೆಂಗಳೂರು ಮತ್ತು ಮೈಸೂರಿನ ಒಟ್ಟು ಮೂವರು ಯುವತಿಯರನ್ನು ರಕ್ಷಿಸಿದ್ದಾರೆ.
ಡಿಸಿಪಿ ಎಂ.ಎಸ್.ಗೀತಾ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಸಿ.ಕೆ.ಅಶ್ವಥ್ ನಾರಾಯಣ ಉಸ್ತುವಾರಿಯಲ್ಲಿ ಇನ್ಸ್‍ಪೆಕ್ಟರ್ ಎ.ಮಲ್ಲೇಶ್, ಪಿಎಸ್‍ಐ ಪ್ರತಿಭಾ ಜಂಗವಾಡ ಮತ್ತು ಸಿಬ್ಬಂದಿಗಳು ದಾಳಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಈ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು