ಮಂಡ್ಯದಲ್ಲಿ ತಾಯಿ ಮಗನ ಸಂಶಯಾಸ್ಪದ ಸಾವು

ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ, ರೈಲ್ವೆ ಹಳಿ ಮೇಲೆ ಮಗನ ಶವ ಪತ್ತೆ

ಮಂಡ್ಯ : ನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ಅಭಿನವ ಭಾರತಿ ಶಾಲೆಯ ನಿವೃತ್ತ ಶಿಕ್ಷಕಿ ವೀಣಾ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇಂದು ವೀಣಾ ಅವರ ಮಗ ನಿತೀನ್‌ ಶವ ರೈಲ್ವೆ ಹಳಿಯ ಮೇಲೆ ಪತ್ತೆಯಾಗಿದೆ.
ನಗರದ ಕ್ರಿಶ್ಚಿಯನ್ ಕಾಲೋನಿಯ ಎರಡನೇ ಕ್ರಾಸ್ ಮನೆಯಲ್ಲಿ ನಿವೃತ್ತ ಶಿಕ್ಷಕಿ ವೀಣಾ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದ್ದು, ಮಗ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು.
ಆದರೆ, ಸೋಮವಾರ ಬೆಳಿಗ್ಗೆ ವೀಣಾ ಅವರ ಮಗ ನಿತಿನ್ ಅವರ ಮೃತದೇಹ ಮಂಡ್ಯ ನಗರದ ಸಮೀಪವಿರುವ ವಿ.ಸಿ. ಫಾರಂ ಗೇಟ್ ಬಳಿಯ ರೈಲ್ವೆ ಹಳಿಯ ಮೇಲೆ ಪತ್ತೆಯಾಗಿದ್ದು,ಈತ ರೈಲಿಗೆ ತಲೆ ಕೊಟ್ಟು ಸಾವನಪ್ಪಿದ್ದಾನೆ.
ತಾಯಿ ಕೊಲೆಗೈದು ಪ್ರಾಯಶ್ಚಿತ್ತಕ್ಕೆ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರಬಹುದಾ ಅಥವಾ ತಾಯಿಯ ಸಾವಿನಿಂದ ಮನನೊಂದಿ ಆತ್ಮಹತ್ಯೆ ಮಾಡಿಕೊಂಡಿದ್ದನಾ ಎನ್ನುವ ಸತ್ಯ  ತಣಿಖೆಯಿಂದ ತಿಳಿಯಬೇಕಿದೆ.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು