ಜೇನುಗೂಡು ಸಮಿತಿಯಿಂದ ಆಷಾಡ ಮಾಸದ ಪ್ರಯುಕ್ತ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ, ಅನ್ನಸಂತರ್ಪಣೆ

ಮೈಸೂರು : ಆಷಾಢ ಮಾಸದ ಪ್ರಯುಕ್ತ ಮೈಸೂರು ವಿಜಯನಗರದ ಜೇನುಗೂಡು ಸೇವಾ ಸಮಿತಿ ವತಿಯಿಂದ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜೇನುಗೂಡು ಸೇವಾ ಸಮಿತಿಯ  ಮಾಲಾ ಮಹೇಂದ್ರ ಅವರು ಮಾತನಾಡಿ, ಕಳೆದ ಹದಿನೈದು ವರ್ಷಗಳಿಂದ ಸತತವಾಗಿ ನಮ್ಮ ಸಂಸ್ಥೆ ವತಿಯಿಂದ ತಾಯಿ ಚಾಮುಂಡೇಶ್ವರಿಯ ಪೂಜಾ ಕಾರ್ಯಕ್ರಮ ನೆರವೇರಿಸುತ್ತಾ ಬರುತ್ತಿದ್ದು, ಎಂದಿನಂತೆ ಈ ಬಾರಿಯೂ ಕೂಡಾ ಅತ್ಯಂತ ವಿಜೃಂಭಣೆಯಿಂದ ಪೂಜೆ ಸಲ್ಲಿಸಲಾಗಿದೆ, ವಿಜಯನಗರ ಹಾಗೂ ಸುತ್ತಮುತ್ತಲಿನ ಸುಮಾರು ೫ಸಾವಿರಕ್ಕೂ ಹೆಚ್ಚು ಭಕ್ತರಿಗೆ ಮಾಂಸಾಹಾರ ಮತ್ತು ಸಸ್ಯಾಹಾರ ಊಟದ ವ್ಯವಸ್ಥೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ತಾಯಿಯ ಕೃಪೆಯಿಂದ ಇನ್ನೂ ದೊಡ್ಡ ಮಟ್ಟದಲ್ಲಿ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ ಎಂದರು.
ಈ ವೇಳೆ, ನಗರ ಪಾಲಿಕೆ ಸದಸ್ಯ ಎಸ್‌ಬಿಎಂ ಮಂಜು, ರಾಧಾ ಸಂದೀಪ್, ಕವೀಶ್‌ ಗೌಡ, ನವೀಶ್ ಗೌಡ, ರುತಿಕ್, ರತನ್ ಚಿಕ್ಕು, ಸೇರಿದಂತೆ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು