ದನ ತಿನ್ನೊ ಜನ ಅಧಿಕಾರಕ್ಕೆ ಬಂದಿದ್ದಾರೆ : ಶಿವಲಿಂಗೇಗೌಡ ಕಿಡಿ

ಪಾಂಡವಪುರ : ದನ ತಿನ್ನೊ ಜನ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಗೋ ಶಾಲೆಗಳನ್ನು ತೆರೆಯುವ ಯೋಜನೆ ಸ್ಥಗಿತ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಮೈ ಶುಗರ್‌ ಮಾಜಿ ಅಧ್ಯಕ್ಷ ಶಿವಲಿಂಗೇಗೌಡ ಆಡಳಿತರೂಢ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿ ಕಾರಿದರು.
ತಮಿಳುನಾಡಿಗೆ ಕೆಆರ್‌ಎಸ್‌ ಜಲಾಶಯದಿಂದ ಕಾವೇರಿ ನೀರು ಹರಿಸುತ್ತಿರುವದನ್ನು ಖಂಡಿಸಿ ಬಿಜೆಪಿ ಕರೆ ಕೊಟ್ಟಿದ್ದ ಪ್ರತಿಭಟನೆ ಹಾಗೂ ರಸ್ತೆ ತಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ತಹಸಿಲ್ದಾರ್‌ ಅವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಮೈಸೂರಿನ ಸಿದ್ದರಾಮಯ್ಯ ಸಿಎಂ ಮತ್ತು ಕನಕಪುರದ ಡಿ.ಕೆ.ಶಿವಕುಮಾರ್‌ ಡಿಸಿಎಂ ಆದ ಮೇಲೆ ಬಿಜೆಪಿ ಸರ್ಕಾರ ಜಿಲ್ಲೆಗೊಂದು ಗೋ ಶಾಲೆ ತೆರೆಯುವ ಯೋಜನೆ ಸ್ಥಗಿತ ಮಾಡಿದ್ದಾರೆ. ಇವರಿಗೆ ಗೋವು ಆಹಾರವಾಗಿ ಕಂಡಿದೆ. ಈ ಕಾರಣದಿಂದ ಗೋ ಶಾಲೆ ಯೋಜನೆ ನಿಲ್ಲಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಿಸಾನ್‌ ಸಮ್ಮಾನ್‌ ಯೋಜನೆ ಜಾರಿ ಮಾಡಿ ರೈತರಿಗೆ ವಷಕ್ಕೆ ೬ ಸಾವಿರ ರೂ ಸಹಾಯ ಧನ ನೀಡುತ್ತಿತ್ತು. ರಾಜ್ಯದಲ್ಲಿಯೂ ಅಂದು ಮುಖ್ಯಮಂತ್ರಿಯಾಗಿದ್ದ ಬಿ.ಎಸ್‌.ಯಡಿಯೂರಪ್ಪ ಅವರು ಕೇಂದ್ರದ ೬ ಸಾವಿರ ರೂ. ಜತೆ ರಾಜ್ಯದಿಂದ ೪ ಸಾವಿರ ರೂ. ನೀಡಿ ಒಟ್ಟು ೧೦ ಸಾವಿರ ರೂ. ರೈತರ ಖಾತೆಗೆ ಜಮೆ ಮಾಡುತ್ತಿದ್ದರು. ಆದರೇ, ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬರುತ್ತಿದ್ದಂತೆ ೪ ಸಾವಿರ ರೂ. ಸ್ಥಗಿತ ಮಾಡಿದೆ. ರೈತರ ಮಕ್ಕಳಿಗೆ ನೀಡುತ್ತಿದ್ದ ಸ್ಕಾಲರ್‌ ಶಿಪ್‌ ನಿಲ್ಲಿಸಿದೆ. ಇವರಿಗೆ ಮಾನ ಮರ್ಯಾದೆ ಇಲ್ಲ. ಇದು ರೈತ ವಿರೋಧಿ ಸರ್ಕಾರ. ತಮಿಳುನಾಡು ಸರ್ಕಾರ ನೀರು ಕೇಳುವ ಮುಂಚೆಯೇ ನೀರು ಬಿಡುತ್ತಿದ್ದಾರೆ. ಕೂಡಲೇ ನೀರು ಬಿಡುವುದನ್ನು ನಿಲ್ಲಿಸಬೇಕು ಎಂದರು.
ಬಿಜೆಪಿ ಮುಖಂಡ ಡಾ.ಎನ್‌.ಎಸ್‌.ಇಂದ್ರೇಶ್‌ ಮಾತನಾಡಿ,
ರಾಜ್ಯ ಸರ್ಕಾರಕ್ಕೆ ರೈತರ ಮೇಲೆ ಕಿಂಚಿತ್‌ ಕಾಳಜಿ ಇದ್ದರೂ ನೀರು ಬಿಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು.

ಮನವಿ ಸಲ್ಲಿಕೆಗೂ ಮುನ್ನ ಪಾಂಡವಪುರ ಪಟ್ಟದ  ಐದು ದೀಪ ವೃತ್ತದಲ್ಲಿ ಬಿಜೆಪಿಯ ರೈತ ಮೋರ್ಚಾ ವತಿಯಿಂದ ರಸ್ತೆ ತಡೆ ಪ್ರತಿಭಟನೆ ನಡೆಯಿತು. ವೇಳೆ ಬಿಜೆಪಿಯ ನೂರಾರು ಕಾರ್ಯಕರ್ತರು ಪಾಲ್ಗೊಂಡು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಜತೆಗೆ ಬಿಜೆಪಿ ಆಡಳಿತದಲ್ಲಿ ರೂಪಿಸಿದ್ದ ಯೋಜನೆಗಳನ್ನು ಕಾಂಗ್ರೆಸ್‌ ಸರ್ಕಾರ ಕೈ ಬಿಟ್ಟಿರುವ ಬಗ್ಗೆ ಪಟ್ಟಿ ಮಾಡಿ ಕರಪತ್ರ ಹಂಚಿದರು.
 ಪ್ರತಿಭಟನೆಯಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷ  ಸುಡಿಯೋ ಅಶೋಕ್, ರೈತ ಮೋರ್ಚಾ ಅಧ್ಯಕ್ಷ ಕನ್ನಂಬಾಡಿ ಸುರೇಶ್,
ತಾಪಂ ಮಾಜಿ ಸದಸ್ಯೆ ಮಂಗಳ ನವೀನ್, ಜಕ್ಕನಹಳ್ಳಿ ಪುರುಷೋತ್ತಮ್, ಕೆನ್ನಾಳು ಚಿಕ್ಕಣ್ಣ, ಶ್ರೀನಿವಾಸ್ ನಾಯಕ್, ಡೇರಿ ರಾಮು, ಹೇಮಂತ್, ವಿನಯ್  ಸೇರಿದಂತೆ ಹಲವಾರು ಜನರು ಭಾಗಿಯಾಗಿದ್ದರು
.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು