ಮೈಸೂರು-ಕೊಡಗು ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಎಂ.ಲಕ್ಷ್ಮಣ್‌ರಿಗೆ ಟಿಕೆಟ್ ಬಹುತೇಕ ಖಚಿತ : ಅಧಿಕೃತ ಪ್ರಕಟಣೆಯೊಂದೇ ಬಾಕಿ

ಮೈಸೂರು : ಸಂಸದ ಪ್ರತಾಪ್ ಸಿಂಹ ಅವರು ಕಾಂಗ್ರೆಸ್ ಪಕ್ಷ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನೀಡುತ್ತಿದ್ದ ಟೀಕೆ ಟಿಪ್ಪಣಿಗಳಿಗೆ ಸಮರ್ಥವಾಗಿ ಉತ್ತರಿಸಿ ಸಿಂಹ ಅವರ ಬಾಯಿ ಮುಚ್ಚಿಸುವಲ್ಲಿ ಯಶಸ್ವಿಯಾಗಿದ್ದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರಿಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್ ಬಹುತೇಕ ಖಚಿತವಾಗಿದ್ದು, ಇಂದು ಸಂಜೆ ಅಧಿಕೃತ ಪ್ರಕಟಣೆ ಹೊರ ಬೀಳುವ ಸಾಧ್ಯತೆ ಇದೆ.
ಲಕ್ಷ್ಮಣ್ ಕೆಪಿಸಿಸಿ ವಕ್ತಾರರಾದ ಬಳಿಕ ಪ್ರಮುಖವಾಗಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರ ಪ್ರತಿಯೊಂದು ಹೇಳಿಕೆಗೂ ತಕ್ಕ ಮತ್ತು ಸ್ಪಷ್ಟ ಉತ್ತರ ನೀಡುವ ಮೂಲಕ ಟಾಂಗ್ ನೀಡುತ್ತಿದ್ದರು. ಅಲ್ಲದೇ ಹಲವು ಪ್ರಕರಣಗಳನ್ನೂ ಸಹ ಬಯಲಿಗೆ ಎಳೆದು ಪ್ರತಾಪ್ ಸಿಂಹ ಅವರಿಗೆ ಮಜುಗರ ಉಂಟುಮಾಡಿದ್ದರು. ರಾಜ್ಯದಲ್ಲಿ  ಕಾಂಗ್ರೆಸ್ ವಿರೋಧ ಪಕ್ಷದಲ್ಲಿದ್ದಾಗ ಲಕ್ಷ್ಮಣ್, ಸಿದ್ದರಾಮಯ್ಯ ವಿರುದ್ಧ ಪ್ರತಾಪ್ ಸಿಂಹ ನೀಡುತ್ತಿದ್ದ ಪ್ರತಿಯೊಂದು ಹೇಳಿಕೆಗೂ ಪತ್ರಿಕಾಗೋಷ್ಠಿ ನಡೆಸಿ ಸಮರ್ಥವಾದ ಉತ್ತರ ನೀಡುತ್ತಿದ್ದರು. ಇವರ ಮಾತಿನ ವರಸೆಗೆ ಬೆಚ್ಚಿಬಿದ್ದ ಪ್ರತಾಪ್ ಸಿಂಹ ತಮ್ಮ ವಿರುದ್ಧ ಲಕ್ಷ್ಮಣ್ ಮಾತನಾಡದಂತೆ ಕೋರ್ಟ್‌ನಿಂದ ತಡೆಯಾಜ್ಞೆಯನ್ನು ತಂದಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು