ಅಂಬೇಡ್ಕರ್ ಜಯಂತಿ ಪ್ರಯುಕ್ತ ಕರ್ನಾಟಕ ಭೀಮಸೇನೆ ಸಂಘಟನೆ ಪದಾಧಿಕಾರಿಗಳಿಂದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

ಮೈಸೂರು : ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಪ್ರಯುಕ್ತ ನಗರದ ಪುರಭವನ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಕರ್ನಾಟಕ ಭೀಮಸೇನೆ ಸಂಘಟನೆಯಿಂದ ಮಾಲಾರ್ಪಣೆ ಮಾಡಲಾಯಿತು.
ಸಂಘಟನೆಯ ಮೈಸೂರು ಜಿಲ್ಲಾಧ್ಯಕ್ಷ ಸರ್ವೇಶ್ ಹಾಗೂ ಪದಾಧಿಕಾರಿಗಳು ಸುಡುವ ಬಿಸಿಲನ್ನೂ ಲೆಕ್ಕಿಸದೆ, ಪಾದಯಾತ್ರೆ ಮೂಲಕ ಘೋಷಣೆಗಳನ್ನು ಕೂಗುತ್ತಾ ಆಗಮಿಸಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚಣೆ ಸಲ್ಲಿಸಿದರು.
ಈ ವೇಳೆ ಸರ್ವೇಶ್ ಮಾತನಾಡಿ, ದೇಶದ ಎಲ್ಲ ಧರ್ಮ, ಜಾತಿ, ಸಮುದಾಯದ ಜನರಿಗೆ ಅನುಕೂಲವಾಗುವ ಹಾಗೂ ವಿಶೇಷವಾಗಿ ಮಹಿಳೆಯರ ರಕ್ಷಣೆಗೆ ಅಗತ್ಯವಾದ ಕಾನೂನುಗಳನ್ನು ಸಂವಿಧಾನದಲ್ಲಿ ರಚಿಸುವ ಮೂಲಕ ಅಂಬೇಡ್ಕರ್ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ನೀಡಿ ಈ ನಾಡಿನ ಕೀರ್ತಿಯನ್ನು ಜಗತ್ತಿನಲ್ಲಿ ಪಸರಿಸಿದ್ದಾರೆ. ಜಗತ್ತು ಇರುವವರೆಗೂ ಅವರ ಹೆಸರು ಶಾಶ್ವತವಾಗಿರುತ್ತದೆ ಎಂದರು.  
ಈ ಸಂದರ್ಭದಲ್ಲಿ ಕರ್ನಾಟಕ ಭೀಮಸೇನೆ ಮೈಸೂರು ಜಿಲ್ಲಾ ಅಧ್ಯಕ್ಷ ಸರ್ವೇಶ, ಗೌರವಾಧ್ಯಕ್ಷ ಮಾದೇಶ, ನಂಜನಗೂಡು ತಾಲ್ಲೂಕು ಉಪಾಧ್ಯಕ್ಷ ಶಿವಸ್ವಾಮಿ, ಜಿಲ್ಲಾ ಸಮಿತಿ ಪದಾಧಿಕಾರಿಗಳಾದ ಸಂಬಯ್ಯ, ನಾಗರಾಜು, ಶಿವಣ್ಣ ಸ್ವಾಮಿ ಕಟವಾಡಿ, ಮಲ್ಲೇಶ್, ಮುಳ್ಳೂರು ಪ್ರಕಾಶ, ಸಿದ್ದರಾಜು, ಚಲುವರಾಜು, ಬಾಲರಾಜ್ ಮತ್ತಿತರರು ಇದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು