ಮೈಸೂರು : ಡಿ.23 ರಂದು ಸೋಮವಾರ ನಗರದಲ್ಲಿ ಕರ್ನಾಟಕ ರಾಜ್ಯ ರೈತಸಂಘಗಳ ಮಹಾ ಒಕ್ಕೂಟದ ಆಶ್ರಯದಲ್ಲಿ ಹಾಗೂ ಕರ್ನಾಟಕ ರಾಜ್ಯ ರೈತಸಂಘ (ರೈತಬಣ)ದ ನೇತೃತ್ವದಲ್ಲಿ ಪುರಭವನದ ಆವರಣದಲ್ಲಿ ‘ವಿಶ್ವ ರೈತ ದಿನಾಚರಣೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರೈತಬಣದ ಅಧ್ಯಕ್ಷ ಇಂಗಲಗುಪ್ಪೆ ಕೃಷ್ಣೇಗೌಡ ತಿಳಿಸಿದರು.
ಶನಿವಾರ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ರೈತರು ಭಾಗವಹಿಸಲಿದ್ದಾರೆ.
ಈ ಸಂಬಂಧ ನಾಳೆ ಬೆಳಗ್ಗೆ ಮೈಸೂರು ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಾಲಯದಿಂದ ಪುರಭನದ ತನಕ ಸಾಂಸ್ಕøತಿಕ ಕಲಾತಂಡಗಳ ಬೃಹತ್ ಮೆರವಣಿಗೆ ಇರುತ್ತದೆ. ಮೆರವಣಿಗೆಯು ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮೂಲಕ ಸಾಗಿ ಮೈಸೂರು ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಹಾರ್ಡಿಂಜ್ ವೃತ್ತದ ಮೂಲಕ ಗಾಂಧಿ ವೃತ್ತಕ್ಕೆ ತಲುಪುತ್ತದೆ. ಅಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಪುರಭನಕ್ಕೆ ಬಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ವೇದಿಕೆ ತಲುಪುತ್ತದೆ ಎಂದರು.
ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದು, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು, ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು, ಧಾರಾವಾಡದ ಶ್ರೀ ರೇವಣ್ಣ ಸಿದ್ದೇಶ್ವರ ಮಹಾಮಠದ ಶ್ರೀ ಡಾ.ಬಸವರಾಜ ದೇವರು ಸ್ವಾಮೀಜಿಯವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸುವರು.
ಅಲ್ಲದೇ ಕಾರ್ಯಕ್ರಮದಲ್ಲಿ ಮೈಸೂರು-ಕೊಡಗು ಲೋಕಸಭಾ ಸದಸ್ಯರಾದ ಮಾನ್ಯ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಘನ ಉಪಸ್ಥಿತಿ ಇರುತ್ತದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ರೈತಸಂಘ (ರೈತಬಣ)ದ ಅಧ್ಯಕ್ಷರಾದ ಇಂಗಲಗುಪ್ಪೆ ಕೃಷ್ಣೇಗೌಡ ಅವರು ವಹಿಸುವರು. ಕರ್ನಾಟಕ ರಾಜ್ಯ ರೈತಸಂಘಗಳ ಮಹಾ ಒಕ್ಕೂಟದ ಅಧ್ಯಕ್ಷರಾದ ಬೀರಪ್ಪ ದೇಶನೂರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ.
ಮುಖ್ಯ ಅತಿಥಿಗಳಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಪಶುಸಂಗೋಪನಾ ಸಚಿವರಾದ ಕೆ.ವೆಂಕಟೇಶ್, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯ ಸ್ವಾಮಿ, ಶಾಸಕರಾದ ಜಿ.ಟಿ.ದೇವೇಗೌಡ, ಟಿ.ಎಸ್.ಶ್ರೀವತ್ಸ, ರಮೇಶ್ ಬಾಬು ಬಂಡಿಸಿದ್ದೇಗೌಡ, ಕೆ.ಹರೀಶ್ ಗೌಡ, ಡಾ.ರಂಗನಾಥ್, ಹೆಚ್.ಸಿ.ಬಾಲಕೃಷ್ಣ, ದರ್ಶನ್ ದ್ರುವನಾರಾಯಣ, ಕದಲೂರು ಉದಯ್, ಕೊತ್ತನೂರು ಮಂಜುನಾಥ್, ಎಂಎಲ್ಸಿ ಕೆ.ವಿವೇಕಾನಂದ, ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು,ಮಾಜಿ ಶಾಸಕರಾದ ಹೆಚ್.ಪಿ.ಮಂಜುನಾಥ್, ಸಾರಾ ಮಹೇಶ್, ಕೆ.ಸಿ.ನಾರಾಯಣಗೌಡ,ಮಾಜಿ ಮೇಯರ್ ಸಂದೇಶ್ ಸ್ವಾಮಿ ಮತ್ತು ಸಮಾಜ ಸೇವಕರಾದ ಬಿ.ರೇವಣ್ಣ ಸೇರಿದಂತೆ ಅನೇಕ ಗಣ್ಯರು ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಮೈಸೂರು ಜಿಲ್ಲಾಧಿಕಾರಿಗಳಾದ ಲಕ್ಷ್ಮೀಕಾಂತ ರೆಡ್ಡಿ, ದಕ್ಷಿಣ ವಲಯ ಐಜಿಪಿ ಡಾ.ಬೋರಲಿಂಗಯ್ಯ, ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಹಿರಿಯ ರೈತ ಹೋರಾಟಗಾರರಿಗೆ ಸನ್ಮಾನ ಮಾಡಲಾಗುವುದು. ಮತ್ತು ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು ಎಂದರು.
ಈ ಕಾರ್ಯಕ್ರಮಕ್ಕೆ ಮೈಸೂರು ಮಂಡ್ಯ ಚಾಮರಾಜನಗರ ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ವಿಶ್ವ ರೈತದಿನಾಚರಣೆ ಆಹ್ವಾನ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತಸಂಘ(ರೈತಬಣ)ವಿಜಯನಗರ ಜಿಲ್ಲೆ ಅಧ್ಯಕ್ಷರಾದ ಸುರೇಶ್ ನಾಯಕ್, ಮಹಿಳಾ ಘಟಕದ ಅಧ್ಯಕ್ಷರಾದ ನಾಗರತ್ನ, ಮುಖಂಡರಾದ ಮಲ್ಲಿಕ್ ಆವರ್ತಿ, ಅರಸಿನಕೆರೆ ಕೆಂಪರಾಜು ಇದ್ದರು.
0 ಕಾಮೆಂಟ್ಗಳು