ದಸರಾ ಪ್ರಯುಕ್ತ ಮೈಸೂರಿನಲ್ಲಿ ಯಶಸ್ವಿಯಾಗಿ ಜರುಗಿದ ಮಿಕ್ಸಡ್ ಮಾರ್ಷಲ್ ಆರ್ಟ್ಸ್ ಕ್ರೀಡಾಕೂಟ


 ವರದಿ: ನಿಷ್ಕಲ ಎಸ್.ಗೌಡ, ಮೈಸೂರು

ಮೈಸೂರು : ನಾಡಹಬ್ಬ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಮಂಗಳವಾರ ಮಹಾರಾಜ ಒಳಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಮಿಕ್ಸಡ್ ಮಾರ್ಷಲ್ ಆಟ್ರ್ಸ್ ಅಸೋಸಿಯೇಷನ್ ವತಿಯಿಂದ ನಡೆದ ಮಿಕ್ಸಡ್ ಮಾರ್ಷಲ್ ಆರ್ಟ್ಸ್ ಪಂದ್ಯಾವಳಿ ರೋಚಕವಾಗಿ ನಡೆಯಿತು.

ಸುಮಾರು ೪೦ ಕ್ರೀಡಾಪಟುಗಳು ಪಂದ್ಯಾವಳಿಯಲ್ಲಿ ಭಾಗವಹಿಸಿ ಮೈ ನವಿರೇಳಿಸುವ ಪ್ರದರ್ಶನ ನೀಡಿದರು. ಒಂದೊಂದು ಪಂದ್ಯಾವಳಿಯೂ ವಿಶೇಷ ಆಕರ್ಷಣೆ, ರೋಮಾಂಚನ ಮತ್ತು ರೋಚಕವಾಗಿ ನಡೆದವು. ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳು ಕರಾಟೆ, ಕುಂಗ್‌ಫು, ಕಿಕ್ ಬಾಕ್ಸಿಂಗ್, ಬಾಕ್ಸಿಂಗ್, ಜುಡೊ, ಟೆಕ್ವೆಂಡೋ, ಕುಸ್ತಿ ಮುಂತಾದ ಎಲ್ಲ ರೀತಿಯ ಸಮರ ಕಲೆಗಳನ್ನು ಪ್ರದರ್ಶಸಿ ಸಭಿಕರ ಮನಸೂರೆಗೊಂಡರು.

ಹೆಸರಾಂತ ಕರಾಟೆ ಪಟುಗಳಾದ ರ‍್ಯಾಂಬೋ ಕಿರಣ್, ಕೃಷ್ಣಮೂರ್ತಿ ಜಸ್ವಂತ್ ನೇತೃತ್ವದಲ್ಲಿ ನಡೆದ ಮಿಕ್ಸಡ್ ಮಾರ್ಷಲ್ ಆಟ್ರ್ಸ್ ಪಂದ್ಯಾವಳಿಯನ್ನು ಪದ್ಮಶ್ರೀ ಪುರಸ್ಕೃತ ಕಲಾವಿದರಾದ ಡಾ.ಹಾಸನ ರಘು, ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದ ಡಾ.ವೆಂಕಟೇಶ್, ಪ್ರೊ,ಮಹದೇವ ಭರಣಿ, ಸಹನಾ ಶಿವಪ್ಪ ಮುಂತಾದವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ರ‍್ಯಾಂಬೋ ಕಿರಣ್ ಮಾತನಾಡಿ, ನಾಡ ಹಬ್ಬ ಮೈಸೂರು ದಸರಾ ಪ್ರಯುಕ್ತ ಇದೇ ಮೊದಲ ಬಾರಿಗೆ ಮಿಕ್ಸಡ್ ಮಾರ್ಷಲ್ ಆಟ್ರ್ಸ್ ಪಂದ್ಯಾವಳಿ ನಡೆಸಲಾಗಿದೆ. ಕ್ರೀಡಾಪಟುಗಳು ಉತ್ತಮ ಸ್ಪಂದನೆ ತೋರಿದ್ದಾರೆ. ಪಂದ್ಯಾವಳಿಗೆ ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಂಡಿದ್ದೇವೆ. ಇದೊಂದು ವಿಭನ್ನವಾದ ಕ್ರೀಡಾಕೂಟವಾಗಿದ್ದು, ಈ ಪಂದ್ಯಾವಳಿಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಕರಾಟೆ, ಕುಂಗ್‌ಫು, ಕಿಕ್ ಬಾಕ್ಸಿಂಗ್, ಬಾಕ್ಸಿಂಗ್, ಜುಡೊ, ಟೆಕ್ವೆಂಡೋ, ಕುಸ್ತಿ ಮುಂತಾದ ಎಲ್ಲ ರೀತಿಯ ಸಮರ ಕಲೆಗಳನ್ನು ಅಭ್ಯಾಸ ಮಾಡಿದವರಾಗಿದ್ದು, ಸಭಿಕರಿಗೆ ಮೈ ನವಿರೇಳಿಸುವ ಸಾಹಸಗಳನ್ನು ನೋಡುವ ಸುರ್ಣಾವಕಾಶ ದೊರಕಿತು. ಈ ಮೂಲಕ ಮೈಸೂರು ದಸರಾ ಸಂಭ್ರಮದಲ್ಲಿ ಕರ್ನಾಟಕ ರಾಜ್ಯ ಮಿಕ್ಸಡ್ ಮಾರ್ಷಲ್ ಆಟ್ರ್ಸ್ ಅಸೋಸಿಯೇಷನ್ ಪಾಲ್ಗೊಂಡಿರುವುದು ಸಂತಸ ತಂದಿದೆ ಇದಕ್ಕೆ ಪೂರಕವಾಗಿ ಸಹಕಾರ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಚಾಮರಾಜನರ ಸಂಸದರಾದ ಸುನೀಲ್ ಬೋಸ್, ನಂಜನಗೂಡು ಶಾಸಕರಾದ ದರ್ಶನ್ ಧ್ರುವನಾರಾಯಣ ಹಾಗೂ ತೀರ್ಪುಗಾರರಾದ ಅಬ್ದುಲ್ ಮುನೀರ್, ಏಕಲವ್ಯ ಪ್ರಶಸ್ತಿ ಪುರಸ್ಕೃತರಾದ ನವೀನ್, ಕರ್ನಾಟಕ ರಾಜ್ಯ ಮಿಕ್ಸಡ್ ಮಾರ್ಷಲ್ ಆಟ್ರ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಶ್ರೀನಿವಾಸ ರೆಡ್ಡಿ,

ಡಾ.ಲಯನ್ ವೆಂಕಟೇಶ್, ಪ್ರೊ.ಮಹದೇವ ಭರಣಿ, ಸಹನಾ ಶಿವಪ್ಪ ಮುಂತಾದ ಗಣ್ಯರಿಗೆ ನಾವು ಅಭಾರಿಯಾಗಿದ್ದೇವೆ ಎಂದರು.

ಪಂದ್ಯಾವಳಿಯ ಸಮಾರೋಪದಲ್ಲಿ ವಿಜೇತರಿಗೆ ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆಯಿಂದ ಪ್ರಮಾಣಪತ್ರ ಮತ್ತು ಮೆಡಲ್ ನೀಡಲಾಯಿತು.

ಈ ಸಂದರ್ಭದಲ್ಲಿ ನಾಡಿನ ಹೆಸರಾಂತ ಕರಾಟೆ ಪಟುಗಳಾದ ಶ್ರೀನಿವಾಸ ರೆಡ್ಡಿ, ಕೃಷ್ಣಮೂರ್ತಿ, ಸುನೀಲ್, ಶಶಿಕುಮಾರ್, ಅಂಬರೀಶ್ ಮುಂತಾದವರು ಇದ್ದರು.